ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಪಡಿತರ ಚೀಟಿದಾರರಿಗೆ ಇಲ್ಲಿದೆ ಒಂದು ಪ್ರಮುಖ ಮಾಹಿತಿ

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆರ್ಭಟದ ಹಿನ್ನೆಲೆಯಲ್ಲಿ ಲಾಕ್ಡೌನ್ ಜಾರಿ ಮಾಡಲಾಗಿದ್ದು, ಈ ಅವಧಿಯಲ್ಲಿ ಪಡಿತರ ಚೀಟಿದಾರರಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಕೇಂದ್ರ, ರಾಜ್ಯ ಸರ್ಕಾರದಿಂದ ಹಂಚಿಕೆಯಾದ ರೇಷನ್ ವಿತರಿಸಲಾಗುತ್ತಿದೆ.

ಪಡಿತರ ವಿತರಣೆಗೆ ಬೆರಳಚ್ಚು ಪಡೆಯಲು ವಿನಾಯಿತಿ ನೀಡಲಾಗಿದೆ. ಬಯೋಮೆಟ್ರಿಕ್ ನಿಂದ ವಿನಾಯಿತಿ ನೀಡಲಾಗಿದ್ದು, ಪಡಿತರ ಚೀಟಿದಾರರು ಮೇ ತಿಂಗಳ ಪಡಿತರವನ್ನು ಬಯೋಮೆಟ್ರಿಕ್ ನೀಡದೆ ಪಡೆದುಕೊಳ್ಳಬಹುದಾಗಿದೆ.

ರೇಷನ್ ಕಾರ್ಡ್ ದಾರರು ಪಡಿತರ ಪಡೆಯಲು ನ್ಯಾಯಬೆಲೆ ಅಂಗಡಿಗೆ ಹೋದ ಸಂದರ್ಭದಲ್ಲಿ ಮೊಬೈಲ್ ಗೆ ಬರುವ ಓಟಿಪಿ ಆಧರಿಸಿ ಪಡಿತರ ವಿತರಿಸಲಾಗುತ್ತದೆ. ಮ್ಯಾನುಯೆಲ್ ಮೂಲಕವೂ ಪಡಿತರ ವಿತರಣೆ ಮಾಡಲಾಗುವುದು. ಪಡಿತರ ಪಡೆಯಲು ಬೆರಳಚ್ಚು ಕಡ್ಡಾಯವಲ್ಲ ಎಂದು ಆಹಾರ ಇಲಾಖೆ ಸುತ್ತೋಲೆ ಹೊರಡಿಸಿದೆ ಎಂದು ಹೇಳಲಾಗಿದೆ.

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

Scroll to Top