ಚಾಲಕ ಹಾಗೂ ಪಿಯೋನ್ ಹುದ್ದೆಗಳು – District Court Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Kalaburagi District Court Recruitment 2023 : ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಉದ್ಯೋಗ ಸುದ್ದಿ – 570 PDO ನೇಮಕಾತಿ ಅಧಿಸೂಚನೆ ಪ್ರಕಟ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕಲಬುರಗಿ ಜಿಲ್ಲಾ ನ್ಯಾಯಾಲಯ ( Kalaburagi District Court )
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು (ಕೆಳಗೆ ವಿವರಿಸಿದೆ)
ಒಟ್ಟು ಹುದ್ದೆಗಳು  60
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ಹುದ್ದೆಗಳ ವಿವರ 
ಶೀಘ್ರಲಿಪಿಗಾರರು ಗ್ರೇಡ್ 3
ಬೆರಳಚ್ಚುಗಾರರು
ಬೆರಳಚ್ಚು ನಕಲುಗಾರರು
ಆದೇಶ ಜಾರಿಕಾರರು
ಜವಾನ

ವಿದ್ಯಾರ್ಹತೆ:
ಶೀಘ್ರಲಿಪಿಗಾರರು ಗ್ರೇಡ್ 3 – ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ (ಸೀನಿಯರ ಗ್ರೇಡ) ಮತ್ತು ಬೆರಳಚ್ಚು ಹಿರಿಯ ದರ್ಜೆ (ಸೀನಿಯರ ಗ್ರೇಡ) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪದವಿಯಾಂದಿಗೆ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯವನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಬೆರಳಚ್ಚುಗಾರರು ಹುದ್ದೆಗಳಿಗೆ ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ (ಸೀನಿಯರ ಗ್ರೇಡ) ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪದವಿಯಾಂದಿಗೆ ಕನ್ನಡ ಹಾಗೂ ಆಂಗ್ಲ ಭಾಷೆಯ ಬೆರಳಚ್ಚು ವಿಷಯವನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ  ಅಭ್ಯರ್ಥಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಕಿರಿಯ ದರ್ಜೆ (ಜೂನಿಯರ್ ಗ್ರೇಡ) ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಪದವಿಯಾಂದಿಗೆ ಕನ್ನಡ ಹಾಗೂ ಆಂಗ್ಲ ಭಾಷೆಯ ಬೆರಳಚ್ಚು ವಿಷಯವನ್ನು ಐಚ್ಚಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಆದೇಶ ಜಾರಿಕಾರರು ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಲಘು ವಾಹನಚಾಲನಾ ಪರವಾನಿಗೆ ಪತ್ರ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಜವಾನ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ಲಘು ವಾಹನಚಾಲನಾ ಪರವಾನಿಗೆ ಪತ್ರ ಐಚ್ಛಿಕವಾಗಿರುತ್ತದೆ.

ಉದ್ಯೋಗ ಸುದ್ದಿ – BMTC ಯಲ್ಲಿ ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ 

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಪ.ಜಾತಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ವೇತನಶ್ರೇಣಿ:
ಜಿಲ್ಲಾ ನ್ಯಾಯಾಲಯ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.17000/-  ರಿಂದ ರೂ.37900/- ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ:
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 200
ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು – ಶುಲ್ಕ ವಿನಾಯಿತಿ ನೀಡಲಾಗಿದೆ.
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು)

ಆಯ್ಕೆ ವಿಧಾನ:
• ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
• ಆದೇಶ ಜಾರಿಕಾರ, ಜವಾನ ಹುದ್ದೆಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  ಫೆಬ್ರವರಿ 24, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  ಮಾರ್ಚ್ 25, 2023
   

ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಶೀಘ್ರಲಿಪಿಗಾರರು ಗ್ರೇಡ್ 3
ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಬೆರಳಚ್ಚುಗಾರರು
ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಬೆರಳಚ್ಚು ನಕಲುಗಾರರು
ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಆದೇಶ ಜಾರಿಕಾರರು
ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಜವಾನ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!