KPSC ನೇಮಕಾತಿ ಅಧಿಸೂಚನೆ 2022 : KPSC Recruitment 2022

KPSC Recruitment 2022: ಕೆಪಿಎಸ್​ಸಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಗ್ರೂಪ್​ ಬಿ ವೃಂದದಲ್ಲಿನ ಸಹಾಯಕ ಅಭಿಯಂತರರ (ಗ್ರೇಡ್​-1) 129 ಹುದ್ದೆ ಮತ್ತು ಹೈದ್ರಾಬಾದ್​ ಕರ್ನಾಟಕದ 59 ಹುದ್ದೆಗಳಿಗೆ ಮಾರ್ಚ್​ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಸದರಿ ಹುದ್ದೆಗಳಿಗೆ ಇದೀಗ ಅದಕ್ಕೆ ಮತ್ತೆ ಹೆಚ್ಚುವರಿಯಾಗಿ 100 ಹುದ್ದೆಗಳು ಸೇರಿದಂತೆ 229 ಹುದ್ದೆಗಳು ಭರ್ತಿಗೆ ಮುಂದಾಗಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 30 ಆಗಿದೆ.

ಇಲಾಖೆ ಹೆಸರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ಹುದ್ದೆಗಳ ಹೆಸರು: ಸಹಾಯಕ ಇಂಜಿನಿಯರ್ (ಗ್ರೇಡ್-1)
ಒಟ್ಟು ಹುದ್ದೆಗಳು  229
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

 

ವಿದ್ಯಾರ್ಹತೆ:
ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾನಿಲಯಗಳಿಂದ ಸಿವಿಲ್​ ಅಥವಾ ಎನ್​ವರ್​ಮೆಂಟರ್​ನಲ್ಲಿ ಬಿಇ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.43100-83900 ರೂ. ಪ್ರತಿ ತಿಂಗಳು

ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಎ ಅಭ್ಯರ್ಥಿಗಳು: 05 ವರ್ಷಗಳು
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 03 ವರ್ಷಗಳು

ಅರ್ಜಿ ಶುಲ್ಕ:
ಪ.ಜಾ, ಪ.ಪಂ ಪ್ರವರ್ಗ 1 ಮತ್ತು ವಿಕಲಚೇತನ ಅಭ್ಯರ್ಥಿಗಳು: ಶುಲ್ಕ ವಿನಾಯಿತಿ
ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು: 300 ರೂ.
ಸಾಮಾನ್ಯ ಅಭ್ಯರ್ಥಿಗಳು: 600 ರೂ.
ಎಲ್ಲಾ ಅಭ್ಯರ್ಥಿಗಳಿಗೆ ಸಂಸ್ಕರಣಾ ಶುಲ್ಕ: 35 ರೂ.



ಅಭ್ಯರ್ಥಿಗಳು ಶುಲ್ಕವನ್ನು ಆನ್ಲೈನ್ ಮೂಲಕ ಸಲ್ಲಿಸಲು ಕೋರಲಾಗಿದೆ.

ಆಯ್ಕೆ ವಿಧಾನ:
ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  2 ಸೆಪ್ಟೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  30ನೇ ಸೆಪ್ಟೆಂಬರ್ 2022
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!