KSRTC ಇಂದ ಮಹತ್ವದ ಪ್ರಕಟಣೆ



 
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ದಿನಾಂಕ 10-12-2020 ರಂದು ಇಲಾಖೆಯಲ್ಲಿ ಖಾಲಿ ಇರುವ ಸಾವಿರಾರು ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಹುದ್ದೆಗಳನ್ನು ನೇರ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಿತ್ತು, ಆದರೆ ಪ್ರಸ್ತುತ ಸರ್ಕಾರದ ಆದೇಶದನುಸಾರ ತಾತ್ಕಾಲಿಕವಾಗಿ ನೇಮಕಾತಿ ಪ್ರಕ್ರಿಯೆಯನ್ನು  ಸ್ಥಗಿತಗೊಳಿಸಿರುವದಾಗಿ ಹಾಗೂ ನೇಮಕಾತಿ ಪ್ರಕ್ರಿಯೆಯ ಮುಂದಿನ ಹಂತದ ಮಾಹಿತಿಯನ್ನು ಬರುವ ದಿನಗಳಲ್ಲಿ ತಿಳಿಸಲಾಗುವುದೆಂದು, ಹುಬ್ಬಳ್ಳಿ ಕೇಂದ್ರ ಕಚೇರಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
 
ಈ ನೇಮಕಾತಿಗೆ ತಾತ್ಕಾಲಿಕ ತಡೆ ನೀಡಲಾಗಿದೆ ಅಷ್ಟೇ ಅದರ ಕಾರಣ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ನಿರಾಶೆಗೊಳ್ಳುವ ಅವಶ್ಯಕತೆಯಿರುವದಿಲ್ಲ, ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ದೊರೆಯಲಿದೆ.
error: Content is protected !!