ಗ್ಯಾಸ್ ಬಳಕೆದಾರರಿಗೆ ಮತ್ತೊಂದು ಶಾಕ್ ಕೊಟ್ಟ ಸರ್ಕಾರ !

ಕೇಂದ್ರದಿಂದ ದಿನೇ ದಿನೇ ಬಡವರಿಗೆ ಶಾಕ್ ಮೇಲೆ ಶಾಕ್ ನೀಡುತ್ತಿರುವ ಸರ್ಕಾರ, ಕಡು ಬಡವರು ಮತ್ತು ಮಧ್ಯಮ ವರ್ಗದ ಜನರು ಜೀವನ ಮಾಡುವುದು ಬಹಳ ಕಠಿಣವಾಗುತ್ತಿದೆ. ರಾಜ್ಯದಲ್ಲಿ ದಿನೇ ದಿನೇ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ, ಅದೇ ರೀತಿ ಇದೀಗ ಎಲ್‌ಪಿಜಿ ಸರದಿ.

ಸರಕಾರಿ ತೈಲ ಮಾರಾಟ ಸಂಸ್ಥೆ (ಒಎಂಸಿ)ಗಳು ದೇಶಾದ್ಯಂತ ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 25 ರೂ. ಏರಿಸಿದ್ದು, ಗುರುವಾರದಿಂದಲೇ ಪರಿಷ್ಕೃತ ದರ ಜಾರಿಗೊಂಡಿದೆ.

ದಿಲ್ಲಿಯಲ್ಲಿ ಸಿಲಿಂಡರ್‌ಗೆ (14.2 ಕೆಜಿ) 694 ರೂ. ಬದಲಾಗಿ 719 ರೂ. ನಿಗದಿಯಾಗಿದೆ. ಬೆಂಗಳೂರಿನಲ್ಲಿ 697 ರೂ. ಇದ್ದ ಗ್ಯಾಸ್‌ ಸಿಲಿಂಡರ್‌ ಬೆಲೆ 722 ರೂ. ತಲುಪಿದೆ. ಮುಂಬಯಿಯಲ್ಲಿ 719 ರೂ., ಚೆನ್ನೈಯಲ್ಲಿ 735 ರೂ.ವರೆಗೆ ಏರಿಕೆಯಾಗಿದೆ.

ಗ್ಯಾಸ್‌ ಸಿಲಿಂಡರ್‌ಗಳ ದರ ಏರಿಕೆ ಮುಖ್ಯವಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಎಲ್‌ಪಿಜಿ ದರ ಮಾನದಂಡ, ಡಾಲರ್‌ ಮತ್ತು ರೂಪಾಯಿ ನಡುವಿನ ವಿನಿಮಯ ದರಗಳನ್ನು ಅವಲಂಬಿಸಿದೆ.

ಹೊಸ ಉದ್ಯೋಗ ಮಾಹಿತಿ 

ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಹುದ್ದೆಗಳು 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ ಮತ್ತು ಸ್ವಚ್ಛ ಭಾರತ್ ಯೋಜನೆಯಡಿ ಕೇಂದ್ರ ಕಚೇರಿ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಖಾಲಿ ಇರುವ 13 ವಿವಿಧ ವ್ಯವಸ್ಥಾಪಕ ಮತ್ತು ಸಮಾಲೋಚಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ದಿನಾಂಕ ಫೆಬ್ರುವರಿ 20, 2021ರಂದು ಕೊನೆಯ ದಿನವಾಗಿದೆ.

* ಹುದ್ದೆಗಳ ವಿವರ :
SLWM ಕನ್ಸಲ್ಟೆಂಟ್- 02 ಹುದ್ದೆಗಳು
ಜಿಲ್ಲಾ ಯೋಜನಾ ವ್ಯವಸ್ಥಾಪಕ (ಡಿಪಿಎಂ) – 01 ಹುದ್ದೆ
ಜಿಲ್ಲಾ MIS ಸಲಹೆಗಾರ- 05 ಹುದ್ದೆಗಳು
ಜಿಲ್ಲಾIEC ಸಲಹೆಗಾರ- 01 ಹುದ್ದೆ
ಜಿಲ್ಲಾ SLWM ಸಲಹೆಗಾರ- 04 ಹುದ್ದೆಗಳು


ಒಟ್ಟು ಹುದ್ದೆಗಳು: 13
ಅರ್ಜಿ ಸಲ್ಲಿಸಲು ಕೊನೆಯ ದಿನ: 20 ಫೆಬ್ರುವರಿ 2021
ಉದ್ಯೋಗ ಸ್ಥಳ: ಕರ್ನಾಟಕ

ವಿದ್ಯಾರ್ಹತೆ:
ಹುದ್ದೆಗಳಿಗನುಗುಣವಾಗಿ MCA, MSc, BE, ಪದವಿ ಮತ್ತು ಸ್ನಾತಕೋತ್ತರ ಪದವಿಯ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು, ಹಾಗೂ 3-8 ವರ್ಷಗಳ ಕೆಲಸದ ಅನುಭವವನ್ನು ಹೊಂದಿರಬೇಕು.

ವೇತನಶ್ರೇಣಿ:
– ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 22000 /- ರೂ ಗಳಿಂದ 45000 /- ರೂ ಗಳ ವರೆಗೆ ವೇತನವನ್ನು ನೀಡಲಾಗುವುದು.


ಆಯ್ಕೆ ವಿಧಾನ:
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಹತೆಗನುಸಾರ ಆಯ್ಕೆಪಟ್ಟಿ ರಚಿಸಿ, ಸಂದರ್ಶನದ ಮೂಲಕ ನೇಮಕ ಮಾಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಈ ಮೇಲೆ ನೀಡಿರುವ ಲಿಂಕ್’ಗಳ ಮೂಲಕ ಅಧಿಕೃತ ಅರ್ಜಿ ನಮೂನೆಗಳನ್ನೂ ಡೌನ್ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ವಿವರಗಳನ್ನು ಭರ್ತಿ ಮಾಡಿ ಎಲ್ಲ ಮೂಲ ದಾಖಲೆಗಳೊಂದಿಗೆ ಕೆಳಗೆ ನೀಡಿರುವ ವಿಳಾಸಕ್ಕೆ ದಿನಾಂಕ ಫೆಬ್ರುವರಿ 20, 2021 ರೊಳಗೆ ತಲುಪುವಂತೆ ಅರ್ಜಿಯನ್ನು ಸಲ್ಲಿಸಬಹುದು.

* ಅರ್ಜಿ ಸಲ್ಲಿಸಬೇಕಾದ ವಿಳಾಸ:
“The Commissioner,
Rural Drinking Water and Sanitation Department”,
2nd Floor, KHB Complex, Cauvery Bhavan,
K.G Road, Bengaluru – 560009.

ರಾಜ್ಯ ಅರ್ಜಿ ನಮೂನೆಗಾಗಿ ಇಲ್ಲಿ ಕ್ಲಿಕ್ ಮಾಡಿ
ಜಿಲ್ಲಾ ಅರ್ಜಿ ನಮೂನೆಗಾಗಿ ಇಲ್ಲಿ ಕ್ಲಿಕ್ ಮಾಡಿ
ನೋಟಿಫಿಕೇಶನ್ ಗಾಗಿ ಇಲ್ಲಿ ಕ್ಲಿಕ್ ಮಾಡಿ 

error: Content is protected !!