WhatsApp Telegram Group

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್!

ನಿರುದ್ಯೋಗಿಗಳಿಗೆ ಹೊಸ ಉದ್ಯೋಗಗಳು 

 

ಕಲಬುರಗಿ: ಈ ಭಾಗದಲ್ಲಿ ಹೆಚ್ಚಾಗಿ ಬೆಳೆಯುತ್ತಿರುವ ಜೋಳ, ತೊಗರಿ ಹಾಗೂ ಹೆಸರು ಕಾಳುಗಳನ್ನು ಖರೀದಿಸಿ ನ್ಯಾಯಬೆಲೆ ಅಂಗಡಿ ಮೂಲಕ ವಿತರಿಸಲು ಕ್ರಮಕೈಗೊಳ್ಳುವುದಾಗಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ವಿ. ಕತ್ತಿ ಅವರು ಭರವಸೆ ನೀಡಿದ್ದಾರೆ.

ಕಲಬುರಗಿ ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ 72ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು.


In Article ad

 

ಹಾಗೆಯೇ ದಕ್ಷಿಣ ಕರ್ನಾಟಕದ ಪ್ರಮುಖ ಆಹಾರ ಬೆಳೆಯಾಗಿರುವ ರಾಗಿ ಧಾನ್ಯವನ್ನೂ ಪಡಿತರಕ್ಕೆ ಸೇರ್ಪಡೆ ಮಾಡಲಿದ್ದು, ಏಪ್ರಿಲ್ 1 ರಿಂದ ನ್ಯಾಯಬೆಲೆ ಅಂಗಡಿಗಳ ಮೂಲಕ ಈ ಆಹಾರ ಧಾನ್ಯಗಳ ವಿತರಣೆ ಮಾಡಲು ಚಿಂತನೆ ನಡೆದಿದೆ ಎಂದು ಹೇಳಿದ್ದಾರೆ.

ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಪಡಿತರ ಕಾರ್ಡ್ ಹೊಂದಿರುವ ಪ್ರತಿ ಕುಟುಂಬಕ್ಕೂ 1 ಕೆಜಿ ಬೆಲ್ಲ ಕೊಡಲು ಕ್ರಮ ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಪತ್ರ ಬರೆದಿದ್ದಾರೆ.

 

In Article ad

 

ಅಲೆಮನೆಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದ್ದು, ಕೇರಳ ಮತ್ತು ತಮಿಳುನಾಡಿನಲ್ಲಿ ಪಡಿತರ ಮೂಲಕ ಸಕ್ಕರೆ ಬದಲು ಬೆಲ್ಲ ನೀಡುವ ವ್ಯವಸ್ಥೆ ಜಾರಿಗೆ ತಂದಿದ್ದಾರೆ. ಅದೇ ರೀತಿ ಕರ್ನಾಟಕದಲ್ಲಿಯೂ ಪಡಿರ ಮೂಲಕ ಒಂದು ಕೆಜಿ ಬೆಲ್ಲ ನೀಡುವ ವ್ಯವಸ್ಥೆ ಜಾರಿಗೆ ತಂದರೆ ಆತ್ಮ ನಿರ್ಭರ ಯೋಜನೆಯಡಿಯಲ್ಲಿ ಅಲೆಮನೆಗಳ ಪುನಶ್ಚೇತನ ಮಾಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

 

ನಿರುದ್ಯೋಗಿಗಳಿಗೆ ಹೊಸ ಉದ್ಯೋಗಗಳು 

ಜಿಲ್ಲಾವಾರು ಉದ್ಯೋಗ ಮಾಹಿತಿ

close button