ಜಿಲ್ಲಾ ಪಂಚಾಯಿತಿ ನೇಮಕಾತಿ 2021 – RDPR Recruitment 2021

ಉದ್ಯೋಗ ಸುದ್ದಿ 

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೋಜನೆಯಡಿ ಜಿಲ್ಲಾ ಪಂಚಾಯತಗಳಲ್ಲಿ ಖಾಲಿ ಇರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05/07/2021.

ಗುತ್ತಿಗೆ ಅವಧಿ: 1 ವರ್ಷ ಮತ್ತು ಅಭ್ಯರ್ಥಿಯ ಕಾರ್ಯಕ್ಷಮತೆಯ ಮೇಲೆ ಗುತ್ತಿಗೆ ಅವಧಿಯನ್ನು ವಿಸ್ತರಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

ಹುದ್ದೆಗಳ ವಿವರ :
-ಜಿಲ್ಲಾ ಸಮಾಲೋಚಕರು – 05
-ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು – 01
-ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು – 01
ಒಟ್ಟು ಹುದ್ದೆಗಳು: 07

ಶೈಕ್ಷಣಿಕ ವಿದ್ಯಾರ್ಹತೆ
ಹುದ್ದೆಗಳಿಗೆ ಅನುಗುಣವಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ/ ಬೋರ್ಡ್ ನಿಂದ MCA, Msc computer science, BE computer science, Mass communication/ Journalism, Graduate degree in public health/ Rural management ವಿದ್ಯಾರ್ಹತೆಯನ್ನು ಪಡೆದಿರಬೇಕು ಹಾಗೂ ಸಂಭಂದಿತ ವಿಭಾಗದಲ್ಲಿ 03 ವರುಷದ ಅನುಭವವುಳ್ಳವರಾಗಿರಬೇಕು.

10th Pass Jobs 2021
12th Pass Jobs 2021
7th Pass Jobs 2021
Diploma Pass Jobs 2021
ITI Pass Jobs 2021
Degree Pass Jobs 2021

ವಯೋಮಿತಿ:
ಅರ್ಹ ಅಭ್ಯರ್ಥಿಗಳು ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳ ವಯೋಮಿತಿ ಮೀರಿರಬಾರದು.

ವೇತನಶ್ರೇಣಿ:
*ಜಿಲ್ಲಾ M/S ಸಮಾಲೋಚಕರು – Rs 22,000/- to 25,000/-
*ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು- Rs22,000/- to 25,000/-
*ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು -Rs22,000/- to 25,000/-

ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬಿ, ವಯಸ್ಸಿನ ದೃಢೀಕರಣ, ವಿದ್ಯಾರ್ಹತೆ, ಅನುಭವ, ಪ್ರಮುಖ ಸಾಮರ್ಥ್ಯಗಳು, Resume ಹಾಗೂ ಅರ್ಜಿ ಜೊತೆಗೆ “ನಾನು ಈ ಹುದ್ದೆಗೆ ಯಾವ ರೀತಿ ಸೂಕ್ತನಾಗಿದ್ದೇನೆ” ಎಂಬುದರ ಬಗ್ಗೆ ಒಂದು ಪುಟದಲ್ಲಿ ಟಿಪ್ಪಣಿ ಬರೆದು ಅರ್ಜಿಯನ್ನು ಇಲಾಖೆಗೆ ಕಳುಹಿಸಬೇಕು

ಅರ್ಜಿ ಸಲ್ಲಿಸುವ ವಿಳಾಸ
ಆಯುಕ್ತರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ೨ನೇ ಮಹಡಿ, ಕೆ.ಹೆಚ್.ಬಿ ಕಟ್ಟಡ, ಕಾವೇರಿ ಭವನ, ಕೆ.ಜಿ.ರಸ್ತೆ, ಬೆಂಗಳೂರು ೫೬೦೦-೦೦೯ ಈ ವಿಳಾಸಕ್ಕೆ ಅರ್ಜಿಯ ಹಾರ್ಡ್ ಪ್ರತಿಯನ್ನು Notificationದಿನಾಂಕ 05-07-2021 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು. ನಂತರ ಬಂದಂತ ಯಾವುದೇ ಅರ್ಜಿಗಳನ್ನು ಸ್ವೀಕರಿಸುವುದಿಲ


ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 21 ಜೂನ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 5 ಜುಲೈ 2021

Application Form
Notification
Website

 

error: Content is protected !!