ವಾಹನ ಖರೀದಿಗೆ ಪಡೆಯಿರಿ ರೂ 4 ಲಕ್ಷ ಸಬ್ಸಿಡಿ – Swavalambi Sarathi Karnataka Online Application 2023

ವಾಹನ ಖರೀದಿಗೆ ಪಡೆಯಿರಿ 4 ಲಕ್ಷದ ವರೆಗೆ ಸಬ್ಸಿಡಿ 

Swavalambi Sarathi Karnataka Online Application 2023 Apply Online: – ನೀವು ಸ್ವಂತಃ ವಾಹನ ಖರೀದಿಗೆ ಯೋಚಿಸುತ್ತಿದ್ದೀರಾ? ನೀವು ಕರ್ನಾಟಕ ಸರ್ಕಾರ ನೀಡುವ 4 ಲಕ್ಷ ರೂ. ಸಬ್ಸಿಡಿ ಸದುಪಯೋಗ ಪಡೆದುಕೊಳ್ಳಬೇಕಾ? ಹಾಗಿದ್ದಲ್ಲಿ ಸ್ವಾವಲಂಬಿ ಸಾರಥಿ ಯೋಜನೆಯ ಕುರಿತು ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ.

ರಾಜ್ಯ ಸರ್ಕಾರದ ವಿವಿಧ ನಿಗಮಗಳ ಮೂಲಕ ವಿವಿಧ ಸಮೂದಾಯಗಳ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ರೂಪಿಸಲಾಗಿರುತ್ತದೆ. ಅದರಂತೆ ಸ್ವಾವಲಂಬಿ ಸಾರಥಿ ಯೋಜನೆಯು ಅದರಲ್ಲಿ ಒಂದು.

ಯೋಜನೆಯ ಹೆಸರು: ಸ್ವಾವಲಂಬಿ ಸಾರಥಿ ಯೋಜನೆ
ಸಹಾಯಧನ ಮೊತ್ತ: ವಾಹನದ ಮೌಲ್ಯದ ಶೇ 75 ರಷ್ಟು ಅಥವಾ ಗರಿಷ್ಠ ರೂ. 4 ಲಕ್ಷದ ವರೆಗೆ
ಅರ್ಜಿದಾರರ ವಯಸ್ಸು: 18 ರಿಂದ 55 ವರ್ಷ

ಸ್ವಾವಲಂಬಿ ಸಾರಥಿ: ಸರಕು ವಾಹನ/ಬ್ಯಾಕ್ಸಿ ಹಳದಿ ಬೋರ್ಡ್‌ ವಾಹನದ ವೆಚ್ಚದ ಶೇ.75 ರಷ್ಟು ಸಹಾಯಧನ ಗರಿಷ್ಟ ರೂ.4 ಲಕ್ಷ

ಈ ಯೋಜನೆಯಡಿ ಬ್ಯಾಂಕುಗಳಿಂದ ಮಂಜೂರಾತಿ ನೀಡಿದ / ಪಡೆದ ಟ್ಯಾಕ್ಸಿ /ಸರಕು ವಾಹನಗಳನ್ನು ಖರೀದಿಸಲು ಪ್ರತಿ ಫಲಾನುಭವಿಗೆ ವಾಹನದ ಮೌಲ್ಯದ ಶೇ 50 ರಷ್ಟು ಅಥವಾ ಗರಿಷ್ಠ ರೂ. 3,00,000/- ರ ವರೆಗೆ, ಪ್ರಯಾಣಿಕ ಆಟೋ ರಿಕ್ಷಾ ಖರೀದಿಸಲು ಗರಿಷ್ಠ ರೂ. 75,000/- ಸಹಾಯಧನ ನೀಡಲಾಗುತ್ತದೆ. ವಾಹನದ ಉಳಿದ ಮೊತ್ತಕ್ಕೆ ಬ್ಯಾಂಕ್ ಸಾಲ ಪಡೆದುಕೊಂಡ ಬಗ್ಗೆ ಬ್ಯಾಂಕ್ ಪತ್ರವನ್ನು ಸಲ್ಲಿಸಬೇಕು.

ಅರ್ಜಿದಾರರು ಈ ಕೆಳಗಿನ ಎಲ್ಲಾ ಅರ್ಹತೆಗಳಿಗೆ ಬದ್ಧರಾಗಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ;
– ಕರ್ನಾಟಕ ರಾಜ್ಯದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಸೇರಿದವರಾಗಿರಬೇಕು.
– ಕರ್ನಾಟಕದ ಶಾಶ್ವತ ನಿವಾಸಿಯಾಗಿರಬೇಕು.
– ವಯಸ್ಸು 21 ರಿಂದ 45 ವರ್ಷಗಳ ನಡುವೆ ಇರಬೇಕು.
– ಎಲ್ಲಾ ಮೂಲಗಳಿಂದ ಬರುವ ವಾರ್ಷಿಕ ಕುಟುಂಬದ ಆದಾಯವು ರೂ. 4,50,000/- ಕ್ಕಿಂತ ಕಡಿಮೆ ಇರಬೇಕು.
– ಪ್ರಾದೇಶಿಕ ಸಾರಿಗೆ ಅಧಿಕಾರಿಯಿಂದ ನೀಡಲಾದ ಚಾಲನಾ ಪರವಾನಗಿ ಹೊಂದಿರಬೇಕು
– ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ಉದ್ಯೋಗಿಯಾಗಬಾರದು.
– ಕಳೆದ 05 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ/ಅವಳ ಕುಟುಂಬದ ಸದಸ್ಯರು ಸರ್ಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ(ಅರಿವು ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು.

ಅರ್ಜಿದಾರರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಈ ಕೆಳಗಿನ ಎಲ್ಲಾ ಪ್ರಮುಖ ದಾಖಲೆಗಳನ್ನು ಹೊಂದಿರಬೇಕು.
ಅರ್ಜಿದಾರರ ಫೋಟೋ
ಮೊಬೈಲ್ ನಂಬರ್
ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ
ಆದಾಯ ಪ್ರಮಾಣಪತ್ರ
ಆಧಾರ್ ಕಾರ್ಡ್ ಪ್ರತಿ (ನಿವಾಸದ ಪುರಾವೆ)
ವಾಹನ ಚಾಲನಾ ಪರವಾನಗಿ ಪ್ರತಿ
ಬ್ಯಾಂಕ್ ಪಾಸ್ ಬುಕ್
ವಾಹನದ ಅಂದಾಜು ದರಪಟ್ಟಿ
ಸ್ವಯಂ ಘೋಷಣೆ ಪತ್ರ

ಯಾರು ಅರ್ಜಿ ಸಲ್ಲಿಸಬಹುದು?
ಯೋಜನೆಗೆ ಈ ಕೆಳಗಿನ ನಿಗಮಗಳ ವ್ಯಾಪ್ತಿಯಲ್ಲಿ ಬರುವ ಸಮುದಾಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ,
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,
ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ,
ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ,
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗದು,
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 15-12-2023

ವೆಬ್ಸೈಟ್ ಲಿಂಕ್ – ಇಲ್ಲಿ ಕ್ಲಿಕ್ ಮಾಡಿ 
error: Content is protected !!